ಅಂಕಣ 

ಹುಚ್ಚು ಯೋಚನೆ ಮತ್ತು ಯೋಜನೆ…….

Taluknewsmedia.com

Taluknewsmedia.comಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ……….. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪಡ್ತೀರಿ. ಅದೊಂದು ಜೀವ ಜಲ. ಅದನ್ನು ಅದರ ಪಾಡಿಗೆ ಬಿಟ್ಟು ಬಿಡಿ……ಕೃಷಿಗಾಗಿಯೋ, ಕುಡಿಯುವ ನೀರಿಗಾಗಿಯೋ ಎಷ್ಟು ಸಾಧ್ಯವೋ ಅಷ್ಟು ಅದನ್ನ ಸಹಜ ರೀತಿಯಲ್ಲೇ ಉಪಯೋಗಿಸಿಕೊಳ್ಳಿ ಅಷ್ಟೇ. ಅದು ನದಿಗೆ ನೀವು ಕೊಡಬಹುದಾದ ಬಹುದೊಡ್ಡ ಕೊಡುಗೆ. ಅದು ಬಿಟ್ಟು ಅನಾವಶ್ಯಕವಾಗಿ ಕಾವೇರಿ ಆರತಿ ಎನ್ನುವ ಕಾರ್ಯಕ್ರಮ ಮಾಡಿ ಆ ನದಿಯನ್ನು ಕಲ್ಮಶ ಮಾಡುವುದಲ್ಲದೆ, ಮೌಢ್ಯವನ್ನು ಬಿತ್ತುತ್ತಿದ್ದೀರಿ………. ಗಂಗಾರತಿ ಎಂಬ ಕಾರ್ಯಕ್ರಮ ಇದೇ ರೀತಿಯ ಮೌಢ್ಯ. ಇದು ಅದರ ನಕಲು. ಜನರನ್ನು ಭಾವನಾತ್ಮಕವಾಗಿ ಸೆಳೆಯುವ ರಾಜಕೀಯ ಕುತಂತ್ರ. ಜನರಲ್ಲಿ ಗುಲಾಮಿ ಮನಸ್ಥಿತಿ ಬೆಳೆಸುವ ಹುನ್ನಾರ……… ನದಿ ನೀರಿಗೆ ಒಂದಷ್ಟು ಗೌರವ, ಒಂದಷ್ಟು ಪ್ರೀತಿ ಕೊಡಬೇಕೆಂಬುದು ನಿಜ, ಅದು ಸಹಜವಾಗಿಯೇ…

ಮುಂದೆ ಓದಿ..
ಅಂಕಣ 

ಸಾವಿನ ಮಾರ್ಗಗಳ ಹುಡುಕಾಟದಲ್ಲಿ ಮಾನವ ಜನಾಂಗ……….

Taluknewsmedia.com

Taluknewsmedia.comಬಟ್ಟೆ ಇಲ್ಲದೆ, ಊಟವಿಲ್ಲದೆ, ವಸತಿ ಇಲ್ಲದೆ, ಕುಟುಂಬಗಳಿಲ್ಲದೆ, ವಾಹನಗಳಿಲ್ಲದೆ, ಶಾಲಾ-ಕಾಲೇಜುಗಳಿಲ್ಲದೆ, ಆಸ್ಪತ್ರೆ, ಸರ್ಕಾರಗಳಿಲ್ಲದೆ ಹೇಗೋ ಬದುಕುತ್ತಿದ್ದ ಮಾನವ ಅತ್ಯಂತ ವೇಗವಾಗಿ ತನ್ನ ಸುಖ ಭೋಗಕ್ಕೆ ಎಷ್ಟೆಲ್ಲಾ ಸಾಧ್ಯವೋ ಅಷ್ಟೆಲ್ಲಾ ಅನುಕೂಲಗಳನ್ನು ಮಾಡಿಕೊಳ್ಳುತ್ತಾ ಇಂದಿನ ಪರಿಸ್ಥಿತಿ ತಲುಪಿದ್ದಾನೆ……ಗಂಟೆಗೆ ನಾಲ್ಕು ಸಾವಿರಕ್ಕೂ ಹೆಚ್ಚು ಕಿಲೋಮೀಟರ್ ವೇಗದಲ್ಲಿ ಸಂಚರಿಸಬಹುದಾದ ಯುದ್ಧ ವಿಮಾನಗಳು, ಚಂದ್ರಗ್ರಹ, ಮಂಗಳ ಲೋಕಕ್ಕೆ ಹೋಗಬಹುದಾದ ರಾಕೆಟ್ ಗಳು, ವಿಶ್ವದ ಯಾವ ಜಾಗವನ್ನು ಬೇಕಾದರೂ ಮನೆಯಲ್ಲಿ ಕುಳಿತು ನೋಡಬಹುದಾದ ಸಂಪರ್ಕ ಸಾಧನಗಳು, ಯಾರೊಂದಿಗೆ ಬೇಕಾದರೂ ಸಂವಹನ ನಡೆಸಬಹುದಾದ ಮಾಧ್ಯಮಗಳು, ಇನ್ನೂ ಮುಂದುವರೆದು ಇತ್ತೀಚೆಗೆ ಬೆಳವಣಿಗೆ ಆಗುತ್ತಿರುವ ಎಐ ತಂತ್ರಜ್ಞಾನ, ಜೊತೆಗೆ ವಿಧವಿಧದ ಭಕ್ಷ್ಯ ಭೋಜನಗಳನ್ನು, ಬಣ್ಣ ಬಣ್ಣದ ಬಟ್ಟೆಗಳನ್ನು, ಮಾದಕ ಪಾನೀಯಗಳನ್ನು, ಅತ್ಯುತ್ತಮ ಸಂಬಂಧಗಳನ್ನು, ವೈಭವೋಪೇತ ಮನೆಗಳು ಎಲ್ಲವನ್ನು ಇಟ್ಟುಕೊಂಡು, ಸುಖಪಡಬೇಕಾದ ಕಾಲದಲ್ಲಿ ಮನುಷ್ಯ ಸಾವಿನ ಮಾರ್ಗಗಳ ಹುಡುಕಾಟದಲ್ಲಿರುವುದು ” ನಗೆಯು ಬರುತಿದೆ ಎನಗೆ ನಗೆಯು ಬರುತಿದೆ ” ಎಂಬ…

ಮುಂದೆ ಓದಿ..
ಅಂಕಣ 

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..

Taluknewsmedia.com

Taluknewsmedia.comನನ್ನ ತಾಯಿ ದೈವೀ ಸ್ವರೂಪಿ,ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ,ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು,ನನ್ನ ಹೆಂಡತಿ ಪ್ರೀತಿಯ ಸಾಗರ,ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ,ನನ್ನ ಅತ್ತಿಗೆ ಮಮತಾಮಯಿ,ನನ್ನ ತಂಗಿ ಕರುಣಾಮಯಿ,ನನ್ನ ಗಂಡ ದಕ್ಷ ಪ್ರಾಮಾಣಿಕ,ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,………..ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು )ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ.ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ?ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ, ತಂಗಿ, ಅಣ್ಣ, ಅಕ್ಕ, ಅಪ್ಪ, ಅಮ್ಮ, ಮಕ್ಕಳಲ್ಲಿ…

ಮುಂದೆ ಓದಿ..
ಅಂಕಣ 

ಶೋಷಿತರ ಧ್ವನಿಯನ್ನು ನೆನೆಯುತ್ತಾ…….

Taluknewsmedia.com

Taluknewsmedia.comಇಸಂಗಳನ್ನು ಮೀರಿ ಯೋಚಿಸುವ ಶಕ್ತಿ ಬೆಳೆಸಿಕೊಳ್ಳಬೇಕಾದ ಸನ್ನಿವೇಶದಲ್ಲಿ…..ಕಮ್ಯುನಿಸ್ಟ್ ಜಗತ್ತಿನ ಗ್ಲಾಮರಸ್ ಹೀರೋ ಆರ್ನೆಸ್ಟ್ ಚೆಗುವಾರ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಾ,ಜೂನ್ 14………ಬಂಡವಾಳ ಶಾಹಿ ವ್ಯವಸ್ಥೆಯ ಕಾರ್ಪೊರೇಟ್ ಸಂಸ್ಕೃತಿ ಬಹುತೇಕ ಇಡೀ ಜಗತ್ತನ್ನು ಆಕ್ರಮಿಸಿರುವಾಗ, ಜಾಗತೀಕರಣದ ಮುಕ್ತ ಮಾರುಕಟ್ಟೆಯ ಹೊಸ ಪೀಳಿಗೆ ಮುಖ್ಯವಾಹಿನಿಯಲ್ಲಿ ಮಹತ್ವ ಪಡೆದಿರುವಾಗ ಕಾರ್ಲ್ ಮಾರ್ಕ್ಸ್, ಮಾವೋ, ಸ್ಟಾಲಿನ್, ಕ್ಯಾಸ್ಟ್ರೋ ಮುಂತಾದವರು ಈ ಕೊಳ್ಳುಬಾಕ ಸಂಸ್ಕೃತಿಯ ಜನರ ನಡುವೆ ವಿಲನ್ ರೀತಿಯಲ್ಲಿ ಬಿಂಬಿತವಾಗುತ್ತಿರುವಾಗ, ಬಹುತೇಕ ಯುವ ಸಮೂಹ ಸಂಪರ್ಕ ಕ್ರಾಂತಿಯ ಪರಿಣಾಮವಾಗಿ ಸೂಕ್ಷ್ಮತೆ ಕಳೆದುಕೊಂಡಿರುವಾಗ, ಈಗಲೂ ಈ ವ್ಯವಸ್ಥೆಯ ಬಂಡಾಯಗಾರರಿಗೆ ” ಚೆ ” ಅತ್ಯಂತ ಆಕರ್ಷಕ ಮತ್ತು ಸ್ಪೂರ್ತಿದಾಯಕವಾಗಿದ್ದಾರೆ.ಚೆಗುವಾರ ಅವರ ಹೋರಾಟದ ಹಾದಿಯನ್ನು ಮೆಚ್ಚುತ್ತಲೇ ಅವರ ಅಭಿಮಾನಿಗಳಾಗಿ ಈಗಲೂ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಪಿಕ್ಚರ್ ಚೆಗುವಾರ ಆಗಿರುವುದನ್ನು ಕಾಣಬಹುದು.ಆಧುನಿಕ ಸಂಕೀರ್ಣ ಜೀವನಶೈಲಿಯ ಮೋಹಕ್ಕೆ ಒಳಗಾಗಿ ವಸ್ತು ಸಂಸ್ಕೃತಿ ಮಾನವೀಯ ಮೌಲ್ಯಗಳನ್ನು ವ್ಯಾಪಾರವಾಗಿಸಿರುವಾಗ ಪ್ರತಿಯೊಬ್ಬರು…

ಮುಂದೆ ಓದಿ..
ಅಂಕಣ 

ಅಪ್ಪನ ದಿನ……..ತಂದೆ ಎಂಬ ಪಾತ್ರವ ಕುರಿತು……ಅಪ್ಪಾ…………ಸ್ವಲ್ಪ ಇಲ್ಲಿ ನೋಡಪ್ಪಾ…….

Taluknewsmedia.com

Taluknewsmedia.comಅಪ್ಪನ ಬಗ್ಗೆ ಬರೆಯುವುದು ಏನೂ ಉಳಿದಿಲ್ಲ. ಎಲ್ಲವೂ ಬಟಾಬಯಲು. ಏಕೆಂದರೆ ಭಾರತೀಯ ಸಮಾಜ ಪುರುಷ ಪ್ರಧಾನ ಕೌಟುಂಬಿಕ ವ್ಯವಸ್ಥೆ ಹೊಂದಿದೆ. ( ಜಾಗತೀಕರಣದ ನಂತರ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾದ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾವಲಂಬನೆ ಸಾಧ್ಯವಾದ ನಂತರ ಸ್ವಲ್ಪ ಬದಲಾವಣೆ ಕಾಣುತ್ತಿದೆ. )ಈ ದೇಶದ ಇಂದಿನ ಎಲ್ಲಾ ಪರಿಸ್ಥಿತಿಗಳ ಬಹುಮುಖ್ಯ ಪಾತ್ರದಾರಿ ಅಪ್ಪ, ಅಮ್ಮ ಪೋಷಕ ಪಾತ್ರದಾರಿ ಮಾತ್ರ.ಇವತ್ತಿನ ಸಂದರ್ಭದಲ್ಲಿ ನಿಮಗೆ ನಮ್ಮ ಒಟ್ಟು ವ್ಯವಸ್ಥೆಯ ಬಗ್ಗೆ ಹೆಮ್ಮೆಯಿದ್ದರೆ ಅದಕ್ಕೆ ಅಪ್ಪ ಕಾರಣ ಅಥವಾ ಇದರ ಬಗ್ಗೆ ಅತೃಪ್ತಿ, ಅಸಹನೆ ಇದ್ದರೆ ಅದಕ್ಕೂ ಅಪ್ಪನೇ ಕಾರಣ.ಅಪ್ಪ, ಈ ಸಂಬಂಧವನ್ನು ಅರ್ಥೈಸುವುದು ಹೇಗೆ.ಸ್ವಂತ ಮಕ್ಕಳು ಅಪ್ಪನನ್ನು ಆಕಾಶಕ್ಕೆ ಏರಿಸುತ್ತವೆ, ನನ್ನ ಅಪ್ಪನಂತ ಅಪ್ಪ ಯಾರೂ ಇಲ್ಲ, ಆತನೇ ಪ್ರತ್ಯಕ್ಷ ದೇವರು, ನನ್ನ ಸ್ಪೂರ್ತಿ, ನನ್ನ ಮಾರ್ಗದರ್ಶಕ, ನನ್ನ ಬದುಕು ಕಲಿಸಿದವ ಮುಂತಾಗಿ ವರ್ಣಿಸುತ್ತಾರೆ. ( ಕೆಲವು…

ಮುಂದೆ ಓದಿ..
ಅಂಕಣ 

ಮರಣವೇ ಮಹಾ ನವಮಿ…….ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ..

Taluknewsmedia.com

Taluknewsmedia.comಮರಣವೇ ಮಹಾ ನವಮಿ…….ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ ಸತ್ಯವೂ ಹಿಂಬಾಲಿಸುತ್ತಿರುತ್ತದೆ. ಬದುಕಿನ ಪ್ರಯಾಣದಲ್ಲಿ ಅದೂ ಸಹ ಜೊತೆಗಾರ…….ಅದರಲ್ಲೂ ನಾವು ವಿದೇಶಕ್ಕೆ ಹೋಗಬೇಕಾದರೆ ಸಧ್ಯದಲ್ಲಿ ಇರುವ ಅತ್ಯಂತ ಸುಲಭ, ಸುರಕ್ಷಿತ ಪ್ರಯಾಣದ ಮಾರ್ಗವೆಂದರೆ ವಾಯುಯಾನ ಮಾತ್ರ. ಸಮುದ್ರ ಮತ್ತು ರಸ್ತೆ ತೀರಾ ಅವಾಸ್ತವಿಕ. ನೀವು ಅನಿವಾರ್ಯವಾಗಿ ವಿಮಾನದಲ್ಲಿ ಅದರಲ್ಲಿ ಸಂಚರಿಸಲೇಬೇಕು ಅಂತಹ ಸಂದರ್ಭದಲ್ಲಿ ಅಪರೂಪಕ್ಕೊಮ್ಮೆ ಈ ರೀತಿಯ ಅಪಘಾತವು ಕೂಡ ಆಕಸ್ಮಿಕ ಮತ್ತು ಅನಿರೀಕ್ಷಿತವೇ…

ಮುಂದೆ ಓದಿ..
ಅಂಕಣ 

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12..

Taluknewsmedia.com

Taluknewsmedia.comಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ…..ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ ಕಲ್ಪಿಸಿಕೊಳ್ಳಿ, ದು:ಖದ ಕಟ್ಟೆ ಒಡೆಯುತ್ತದೆ…….ಅಂತಹ ಒಂದು ನೈಜ ಘಟನೆ…..ಅದು ಮಧ್ಯಮ ವರ್ಗದವರೇ ಹೆಚ್ಚಾಗಿ ಹೋಗುವ ಆಂಧ್ರ ಶೈಲಿಯ ಊಟದ ಹೋಟೆಲ್‌. ಅಂದು ಶೂಟಿಂಗ್ ಕೆಲಸ ಮುಗಿಸಿ ಜೊತೆಗಾರರೊಂದಿಗೆ ರಾತ್ರಿ ೧೧ ಗಂಟೆಗೆ ಹೋಟೆಲ್ ಒಳಗೆ ಪ್ರವೇಶಿಸಿದೆ. ಮ್ಯಾನೇಜರ್ ನನಗೆ ಬಹಳ ಪರಿಚಯದವರು. ಹೋಟೆಲ್ ಮುಚ್ಚುವ ಸಮಯ ೧೦/೪೫ . ಆದರೂ ನಾನು ಒಳಗೆ ಹೋದೆ. ಕೇವಲ ಒಂದು ಕುಟುಂಬದವರು ಮಾತ್ರವೇ ಊಟ ಮುಗಿಸಿ ಬಿಲ್…

ಮುಂದೆ ಓದಿ..
ಅಂಕಣ 

” ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು ” ಜಾರ್ಜ್ ವಾಷಿಂಗ್ಟನ್…

Taluknewsmedia.com

Taluknewsmedia.comಅರ್ಥವಾಯಿತೆ ? ಅರ್ಥವಾಗದವರಿಗೆ ಮತ್ತು ಅದರ ಇನ್ನಷ್ಟು ಆಳವಾದ ಹಾಗು ನಮ್ಮ ಸಮಾಜದ ವಾಸ್ತವಕ್ಕೆ ಸರಿಹೊಂದಬಹುದಾದ ಸರಳ ಅರ್ಥ ನೀಡುವ ಪ್ರಯತ್ನ. ಇದು ಎಲ್ಲಾ ವಯಸ್ಸಿನ, ಎಲ್ಲಾ ಪ್ರದೇಶದ, ಎಲ್ಲಾ ವರ್ಗಗಳಿಗೂ ಅನ್ವಯಿಸುವ ಮಾತು. ಆದರೂ ಹೆಚ್ಚಾಗಿ ಯುವ ವಯಸ್ಸಿನವರಿಗೆ ತುಂಬಾ ಎಚ್ಚರಿಕೆಯ ಅರ್ಥ ಕೊಡುತ್ತದೆ.ಮೊದಲಿಗೆ ಕೆಟ್ಟವರು ಎಂದರೆ ಯಾರು ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸಾಮಾನ್ಯವಾಗಿ ನಮ್ಮ ಸಮಾಜದಲ್ಲಿ ಜೂಜು, ಕುಡಿತ, ಅನೈತಿಕವಾಗಿ ಹೆಣ್ಣಿನ ಸಹವಾಸ, ಡ್ರಗ್ಸ್, ಕಳ್ಳತನ ಮುಂತಾದ ದುರಭ್ಯಾಸಗಳನ್ನು ಅನಿಯಂತ್ರಿತವಾಗಿ ಹೊಂದಿರುವವರನ್ನು ಕೆಟ್ಟವರು ಎನ್ನಲಾಗುತ್ತದೆ. ಜೊತೆಗೆ ಆಧುನಿಕ ಸಮಾಜದಲ್ಲಿ ರೌಡಿಸಂ, ಕಾನೂನು ಬಾಹಿರ ಚಟುವಟಿಕೆಗಳು, ಅಕ್ರಮ ವ್ಯವಹಾರಗಳು, ಸಮಾಜದ ಸ್ಥಾಪಿತ ಹಿತಾಸಕ್ತಿಗೆ ವಿರುದ್ಧವಾಗಿ ಹಿಂಸೆಯಲ್ಲಿ ತೊಡಗುವುದು ಮುಂತಾದ ಕ್ರಿಮಿನಲ್ ಚಟುವಟಿಕೆಗಳನ್ನು ಮಾಡುವವರು ಸಹ ಕೆಟ್ಟ ಜನರು ಎನಿಸಿಕೊಳ್ಳುತ್ತಾರೆ. ( ಇದನ್ನು ಹೊರತುಪಡಿಸಿ ಆಂತರ್ಯದಲ್ಲಿ ಕೋಪ, ಅಸೂಯೆ, ದುಡುಕುತನ ಮುಂತಾದ ಕೆಲವು ಕೆಟ್ಟ ಚಾಳಿಗಳು…

ಮುಂದೆ ಓದಿ..
ಅಂಕಣ 

ಅನೈತಿಕ ಸಂಬಂಧಗಳೆಂಬ ಸಾವಿನ ಹೆದ್ದಾರಿ……….

Taluknewsmedia.com

Taluknewsmedia.comಇತ್ತೀಚಿನ ವರ್ಷಗಳಲ್ಲಿ ಭಾರತೀಯ ಸಮಾಜದಲ್ಲಿ ಆಗುತ್ತಿರುವ ಕೆಟ್ಟ ಮತ್ತು ಅಪಾಯಕಾರಿ ಬದಲಾವಣೆ ಎಂದರೆ ಅದು ಅನೈತಿಕ ಮತ್ತು ಅಕ್ರಮ ಸಂಬಂಧಗಳು ಮತ್ತು ಅದರಿಂದಾಗಿ ನಡೆಯುತ್ತಿರುವ ಭೀಕರ ಕೊಲೆಗಳು……ಮನುಷ್ಯ ಸಂಬಂಧಗಳು, ನಂಬಿಕೆಗಳು, ಕೌಟುಂಬಿಕ ವ್ಯವಸ್ಥೆಗಳು, ಪ್ರೀತಿ ಪ್ರೇಮ ಪ್ರಣಯದ ಪಾವಿತ್ರ್ಯತೆ, ಕಾನೂನು ಸುವ್ಯವಸ್ಥೆ ಒಟ್ಟಾರೆ ಸಾಮಾಜಿಕ ವ್ಯವಸ್ಥೆಯೇ ಕುಸಿದು ಬೀಳುವ ಹಂತಕ್ಕೆ ತಲುಪಬಹುದು ಎಂಬಷ್ಟು ವೇಗವಾಗಿ ಮತ್ತು ತೀವ್ರವಾಗಿ ವ್ಯಾಪಿಸುತ್ತಿದೆ……..ಬಹಳ ಹಿಂದೆ ಕಡಿಮೆ ಜನಸಂಖ್ಯೆ, ಸಂಪರ್ಕ ಮಾಧ್ಯಮಗಳ ಕೊರತೆ, ಕೌಟುಂಬಿಕ ಮೌಲ್ಯಗಳ ಗಾಢತೆ, ಹೆಣ್ಣು ಗಂಡು ಸಂಬಂಧಗಳ ಗೌಪ್ಯತೆ, ಆರ್ಥಿಕ ಅಸಮಾನತೆ, ಪುರುಷ ಕೇಂದ್ರಿತ ಸಮಾಜ ಮುಂತಾದ ಕಾರಣಗಳಿಂದ ಅಕ್ರಮ ಸಂಬಂಧಗಳು ಕಡಿಮೆ ಇದ್ದವು, ಹೆಚ್ಚು ಹೊರಗೆ ಬರುತ್ತಿರಲಿಲ್ಲ ಮತ್ತು ಅದಕ್ಕೆ ಬಹುತೇಕ ಪುರುಷರೇ ಹೆಚ್ಚು ಹೊಣೆಗಾರರಾಗಿದ್ದರು……..ಆದರೆ ಮಹಿಳಾ ಸ್ವಾತಂತ್ರ್ಯ, ಸಮಾನತೆ, ಸ್ವಾವಲಂಬನೆ, ಉದ್ಯೋಗ, ನಗರೀಕರಣ, ಸಮೂಹ ಸಂಪರ್ಕ ಮಾಧ್ಯಮಗಳ ಕ್ರಾಂತಿ, ಸಣ್ಣ ಕುಟುಂಬಗಳ ಅನಿವಾರ್ಯತೆ, ವಲಸೆ, ದೂರ…

ಮುಂದೆ ಓದಿ..
ಅಂಕಣ 

ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು……

Taluknewsmedia.com

Taluknewsmedia.comಇದು ಪ್ರೀತಿಯ ಮಾಯೆಯೊಳಗೆ ಸಿಲುಕಿ, ಕಾಮದ ಬಲೆಯೊಳಗೆ ಬಂಧಿಯಾಗಿ, ಅಜ್ಞಾನದ ಮೋಹ ಪಾಶದಲ್ಲಿ ಒದ್ದಾಡಿ, ಹಣದ ದಾಹದಲ್ಲಿ ಮೈಮರೆತು ಅದರಿಂದ ಹೊರಬಂದ ವ್ಯಕ್ತಿಯೊಬ್ಬನ ಸ್ವಗತ…..)ಶಬ್ದವೆಂಬನೆ ಶೋತ್ರದೆಂಜಲು, ಸ್ಪರ್ಶವೆಂಬೆನೆ ತೊಕ್ಕಿ ನೆಂಜಲು, ರೂಪವೆಂಬನೆ ನೇತ್ರದೆಂಜಲು, ಪರಿಮಳವೆಂಬನೆ ಘ್ರಾಣದೆಂಜಲು, ರುಚಿಯೆಂಬೆನೆ ಜಿಹ್ವೆ ಎಂಜಲು, ನಾನೆಂಬೆನೆ ಅರಿವಿನೆಂಜಲು, ಎಂಜಲೆಂಬ ಬಿನ್ನವಳಿದ ಬೆಳಗಿನೊಳಗಣ ಬೆಳಗು, ಗುಹೇಶ್ವರ ಲಿಂಗವು……. ಅಲ್ಲಮಪ್ರಭು,ಸತ್ಯವೂ ಇಲ್ಲ ಅಸತ್ಯವೂ ಇಲ್ಲ, ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನು ಇಲ್ಲ ನೀನು ಇಲ್ಲ, ಇಲ್ಲ ಇಲ್ಲ ಎಂಬುದು ತಾನಿಲ್ಲ, ಗುಹೇಶ್ವರ ಲಿಂಗತಾ ಬಯಲು….ಅಲ್ಲಮಪ್ರಭು,ಹಸಿವಾದೊಡೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳ ಭಾವಿಗಳುಂಟು, ಶಯನಕ್ಕೆ ಹಾಳು ದೇಗುಲಗಳುಂಟು, ಚೆನ್ನಮಲ್ಲಿಕಾರ್ಜುನಯ್ಯ ಆತ್ಮ ಸಂಗಾತಕ್ಕೆ ನೀನೆನಗುಂಟು… – ಅಕ್ಕ ಮಹಾದೇವಿ,ಆಳ ಪ್ರೀತಿಯಲ್ಲಿ ಸಿಲುಕಿ ಅದರಿಂದ ವಂಚನೆಗೊಳಗಾಗಿ ವಿರಹಿಯಾದ ವ್ಯಕ್ತಿಗಳು ಹುಚ್ಚರಾಗುತ್ತಾರೆ ಅಥವಾ ವ್ಯಸನಿಗಳಾಗುತ್ತಾರೆ ಅಥವಾ ತತ್ವಜ್ಞಾನಿಗಳಾಗುತ್ತಾರೆ ಎಂಬ ಮಾತಿದೆ…..ಇಲ್ಲಿನ ವ್ಯಕ್ತಿಯು ತತ್ವಜ್ಞಾನಿಯಾಗುವ ಹಾದಿಯಲ್ಲಿದ್ದಾನೆ ಎನಿಸುತ್ತದೆ……ಪ್ರೀತಿಯ ಆಳದಲ್ಲಿ ಅರಳುವ…

ಮುಂದೆ ಓದಿ..