ಸುದ್ದಿ 

ಕನ್ನಡದ ಗೌರವ ಕಾಪಾಡೋಣ, ಬೆಳೆಸೋಣ: ಬಿ.ವೈ. ವಿಜಯೇಂದ್ರ

Taluknewsmedia.com

Taluknewsmedia.comಕನ್ನಡದ ಗೌರವ ಕಾಪಾಡೋಣ, ಬೆಳೆಸೋಣ: ಬಿ.ವೈ. ವಿಜಯೇಂದ್ರ ಶಿಕಾರಿಪುರ, ನ.1: ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾವಿರಾರು ವರ್ಷಗಳ ಪರಂಪರೆ, ಸಂಸ್ಕೃತಿ ಹಾಗೂ ಇತಿಹಾಸವನ್ನು ಹೊತ್ತು ತಂದಿರುವ ಕನ್ನಡ ಭಾಷೆ ನಮ್ಮ ಗೌರವ, ನಮ್ಮ ಗುರುತು. ಪ್ರತಿಯೊಬ್ಬ ಕನ್ನಡಿಗನು ಕನ್ನಡ ಮಾತನಾಡುವುದು, ಬರೆಯುವುದು ಹಾಗೂ ಬಳಸುವುದು ತನ್ನ ಹೆಮ್ಮೆಯ ವಿಷಯವಾಗಿರಬೇಕು,” ಎಂದರು. ಅವರು ಮುಂದುವರೆದು, “ಕನ್ನಡ ಕೇವಲ ಭಾಷೆಯಲ್ಲ — ಅದು ನಮ್ಮ ಆತ್ಮ. ಕನ್ನಡವನ್ನು ಬಳಸುವುದರಿಂದ ನಾವು ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಟ್ಟುಕೊಳ್ಳುತ್ತೇವೆ. ಆದ್ದರಿಂದ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆಯನ್ನು ಹೆಚ್ಚಿಸಬೇಕು, ಅದರ ಬೆಳವಣಿಗೆಗೆ ನಾವು ಹೊಣೆಗಾರರಾಗಬೇಕು,” ಎಂದು ಹೇಳಿದರು.…

ಮುಂದೆ ಓದಿ..
ಸುದ್ದಿ 

ಬಸವೇಶ್ವರನಗರದಲ್ಲಿ ಕೊಳೆತ ಕೋಳಿ ದಂಧೆ ಬಯಲು – FIR ಏಕೆ ಇಲ್ಲ?

Taluknewsmedia.com

Taluknewsmedia.comಬಸವೇಶ್ವರನಗರದಲ್ಲಿ ಕೊಳೆತ ಕೋಳಿ ದಂಧೆ ಬಯಲು – FIR ಏಕೆ ಇಲ್ಲ? ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾಂಸ ಮಾರಾಟದ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮದ ಗಂಭೀರ ಚಿತ್ರ ಮತ್ತೊಮ್ಮೆ ಹೊರಬಿದ್ದಿದೆ. ಸ್ಟೆರಾಯ್ಡ್ ತುಂಬಿದ ಕೋಳಿ ಮಾಂಸ ಮಾರಾಟವಾಗುತ್ತಿರುವುದು ಒಂದೆಡೆ ಇದ್ದರೆ, ಮತ್ತೊಂದೆಡೆ ಅವಧಿ ಮೀರಿದ, ಕೆಟ್ಟ ವಾಸನೆ ಬರುವ ಹಾಳಾದ ಕೋಳಿಯನ್ನು ಬಣ್ಣ ಬಳಿದು ತಾಜಾ ಎಂದು ಗ್ರಾಹಕರಿಗೆ ಮಾರಾಟ ಮಾಡುವ ಕಳಂಕಿತ ಕಾರ್ಯ ಬೆಳಕಿಗೆ ಬಂದಿದೆ. ನಗರದ ಕುರುಬರಹಳ್ಳಿ ಪ್ರದೇಶದಲ್ಲಿರುವ “MY Chicken & More” ಅಂಗಡಿ ಇದೀಗ ಈ ಆರೋಪದ ಕೇಂದ್ರವಾಗಿದೆ. ಮೀಲುವೆಂಬ ಗ್ರಾಹಕರು ಆ ಅಂಗಡಿಯಿಂದ ಚಿಕನ್ ಖರೀದಿಸಿದ ಬಳಿಕ ಮನೆಗೆ ಬಂದು ನೋಡುತ್ತಿದ್ದಂತೆಯೇ ಮಾಂಸ ಸಂಪೂರ್ಣವಾಗಿ ಹಾಳಾಗಿದ್ದು, ದುರ್ವಾಸನೆ ಹೊಳೆಯುತ್ತಿರೋದನ್ನು ಗಮನಿಸಿದ್ದರು. ತಕ್ಷಣವೇ ಅವರು ಮಾಂಸವನ್ನು ಹಿಡಿದು ಅಂಗಡಿಗೆ ಹಿಂತಿರುಗಿದಾಗ, ಅಂಗಡಿ ಮಾಲೀಕರು ಕ್ಷಮೆ ಕೇಳುವ ಬದಲು ಗ್ರಾಹಕರಿಗೇ ಕಿಡಿಕಾರಿದ್ದು, ಜಗಳವಾಡಿ ಬೆದರಿಕೆಯ…

ಮುಂದೆ ಓದಿ..
ಸುದ್ದಿ 

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

Taluknewsmedia.com

Taluknewsmedia.comಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ತಿಳಿಸಿದ್ದಾರೆ. ಮೈಸೂರು, ನ.3: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಹೇಳಿದರು. ಅರಸು…

ಮುಂದೆ ಓದಿ..
ಸುದ್ದಿ 

ಕೋಲಾರ: ಜಮೀನು ವಿವಾದ ಹಿನ್ನಲೆ ಯುವಕನ ಮೇಲೆ ಹಲ್ಲೆ

Taluknewsmedia.com

Taluknewsmedia.comಕೋಲಾರ: ಜಮೀನು ವಿವಾದ ಹಿನ್ನಲೆ ಯುವಕನ ಮೇಲೆ ಹಲ್ಲೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೈರಪಳ್ಳಿ ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಲೆ ಯುವಕನ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ಕಾರ್ತಿಕ್ ಎನ್ನುವ ಯುವಕನ ಮೇಲೆ ಗ್ರಾಮದಲ್ಲಿನ ವೆಂಕಟರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಎಂಬುವವರಿಂದ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಘಟನೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಫೋನ್‌ಗಳಲ್ಲಿ ಸೆರೆದಲ್ಲಿದ್ದು, ಹಲ್ಲೆಯ ವೇಳೆ ಗಡಾರಿಯನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಯಲ್ಲಿ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಜಮೀನು ವಿಚಾರದಲ್ಲಿ ನಡೆದ ವಾಗ್ವಾದವು ಕೈಯಂಚಿಗೆ ತಿರುಗಿ ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಮುಂದೆ ಓದಿ..
ಸುದ್ದಿ 

ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ: ಮಂಜುನಾಥ ಲೋಕಾಯುಕ್ತ ಬಲೆಗೆ

Taluknewsmedia.com

Taluknewsmedia.comಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ: ಮಂಜುನಾಥ ಲೋಕಾಯುಕ್ತ ಬಲೆಗೆ ತುಮಕೂರು: ಜಮೀನು ಖಾತೆ ಹಸ್ತಾಂತರಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಂಧಿಸಿದ್ದಾರೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ. ಯೋಗೀಶ್ ಅವರ ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನು ಅವರ ತಂದೆಯ ಹೆಸರಿಗೆ ವರ್ಗಾಯಿಸಲು ಮಂಜುನಾಥ ಬಳಿ ಕಾರ್ಯಾಚರಣೆಗಾಗಿ ಸಂಪರ್ಕಿಸಿದ್ದರು. ಈ ವೇಳೆ ಮಂಜುನಾಥ ಅವರು ಮೊದಲಿಗೆ ₹10 ಸಾವಿರ ಲಂಚವನ್ನು ವಸೂಲಿ ಮಾಡಿಕೊಂಡು, ಇನ್ನೂ ₹10 ಸಾವಿರ ನೀಡಬೇಕೆಂದು ಒತ್ತಡಹಾಕಿದಿದ್ದಾರೆಂದು ತಿಳಿದುಬಂದಿದೆ. ಹೆಚ್ಚುವರಿ ಹಣ ನೀಡಲು ಯೋಗೀಶ್ ಸಮ್ಮತಿಸದೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಬಳಿ ಲಂಚದ ಹಣ ಸ್ವೀಕರಿಸುವ ಕ್ಷಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ…

ಮುಂದೆ ಓದಿ..
ಸುದ್ದಿ 

ಕೆ–ಸೆಟ್ ಪರೀಕ್ಷೆ ವಿವಾದ: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಘಟನೆ – ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶದ ಜ್ವಾಲೆ!

Taluknewsmedia.com

Taluknewsmedia.comಕೆ–ಸೆಟ್ ಪರೀಕ್ಷೆ ವಿವಾದ: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಘಟನೆ – ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶದ ಜ್ವಾಲೆ! ಬಳ್ಳಾರಿ: ರಾಜ್ಯದಾದ್ಯಂತ ನಿನ್ನೆ ನಡೆದ ಕೆ–ಸೆಟ್ (K-SET) ಪರೀಕ್ಷೆ ವೇಳೆ ನಡೆದ ಘಟನೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಕೆಲವು ಕೇಂದ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಮತ್ತು ಕೈಕಡಗಗಳನ್ನು ಬಿಚ್ಚಿಸಲು ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂಬ ಆರೋಪ ಹೊರಬಿದ್ದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರ ಕೋಪ ಉಕ್ಕಿ ಹರಿಯುತ್ತಿದೆ. ಕೆಲವು ತಿಂಗಳ ಹಿಂದೆ ನೀಟ್ (NEET) ಪರೀಕ್ಷೆ ಸಮಯದಲ್ಲೂ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಒತ್ತಾಯಿಸಿದ ಘಟನೆ ನೆನಪಿನಲ್ಲೇ ಇರುವಾಗ, ಇದೀಗ ಕೆ–ಸೆಟ್ ಪರೀಕ್ಷೆಯಲ್ಲಿಯೂ ಇಂತಹ ಅಸಹ್ಯಕರ ಘಟನೆ ನಡೆದಿರುವುದು ಖೇದಕಾರಿಯಾಗಿದೆ. ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಈ ಬಾರಿ ಕೆ–ಸೆಟ್ ಪರೀಕ್ಷೆ ನಡೆದಿತ್ತು. ಸುಮಾರು…

ಮುಂದೆ ಓದಿ..
ಸುದ್ದಿ 

ಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ

Taluknewsmedia.com

Taluknewsmedia.comಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಖಾಲಿಯಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರಗೊಳಿಸಬೇಕು ಎಂದು ಪ.ಜಾತಿ/ವರ್ಗದ ಸರಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್‌ ಅವರು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ — ಸರ್ಕಾರದ ವಿವಿಧ ಇಲಾಖೆಯಲ್ಲಿ 7.70 ಲಕ್ಷ ಹುದ್ದೆಗಳಿದ್ದರೂ, ಸುಮಾರು 2.80 ಲಕ್ಷ ಹುದ್ದೆಗಳು ಇನ್ನೂ ಖಾಲಿಯಾಗಿವೆ. ಯುವಕರಿಗೆ ಅವಕಾಶ ದೊರಕಬೇಕಾದ ಈ ಹುದ್ದೆಗಳನ್ನು ತುಂಬದೆ ಇರುವುದು ಬೇಸರ ತಂದಿದೆ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ದಲಿತರ ಹಿತಕ್ಕಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸಲಹೆ ನೀಡಿದರು. ಒಳಮೀಸಲಾತಿ ವಿಷಯದಲ್ಲಿ ಸರಿಯಾದ ನಿರ್ವಹಣೆ ಅಗತ್ಯವಾಗಿತ್ತು, ಆದರೆ ಅದರಿಂದ ದಲಿತರಲ್ಲಿ ಭಿನ್ನಾಭಿಪ್ರಾಯ…

ಮುಂದೆ ಓದಿ..
ಸುದ್ದಿ 

ಬೀದರ್: ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ — ಮೂವರಿಗೆ ಸ್ಥಳದಲ್ಲೇ ಸಾವು

Taluknewsmedia.com

Taluknewsmedia.comಬೀದರ್: ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ — ಮೂವರಿಗೆ ಸ್ಥಳದಲ್ಲೇ ಸಾವು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು (ಬುಧವಾರ) ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವ್ಯಕ್ತಿಗಳು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಐವರು ಪ್ರಯಾಣಿಸುತ್ತಿದ್ದ ಕಾರು ಹುಮ್ನಾಬಾದ್ ಮಾರ್ಗವಾಗಿ ಬೀದರ್–ಕಲಬುರಗಿ ಹೆದ್ದಾರಿಯತ್ತ ತಿರುಗುತ್ತಿದ್ದಾಗ ಕೊರಿಯರ್ ಸೇವೆಗೆ ಬಳಸುತ್ತಿದ್ದ ಲೋಡ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ನವೀನ್‌ (25), ರಾಚಪ್ಪ (45) ಮತ್ತು ನಾಗರಾಜ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು — ಕಾಶಿನಾಥ ಮತ್ತು ಪ್ರತಾಪ — ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ತೆಲಂಗಾಣದ ಸಂಗಾರೆಡ್ಡಿ…

ಮುಂದೆ ಓದಿ..
ಸುದ್ದಿ 

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ

Taluknewsmedia.com

Taluknewsmedia.comಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ ಕಾರವಾರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ (Sharavathi Pump Storage Project) ಕುರಿತು ವಿವಾದ ಮುಂದುವರಿಯುತ್ತಿದ್ದರೂ, ಈ ಯೋಜನೆಗೆ ಅನುಮತಿ ನೀಡಿದವರು ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರವೆಂದು ಸಚಿವ ಮಂಕಾಳು ವೈದ್ಯ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಕನ್ನಡ ರಾಜ್ಯೋತ್ಸವದ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,“ಜನರಿಗೆ ತೊಂದರೆ ಉಂಟಾಗುತ್ತಿದ್ದರೆ ನಾನು ವೈಯಕ್ತಿಕವಾಗಿ ಈ ಯೋಜನೆಗೆ ವಿರೋಧಿಯೇ. ಇದನ್ನು ಬಹಳ ಹಿಂದೆಯೇ ಹೇಳಿದ್ದೇನೆ, ಈಗಲೂ ಅದೇ ನಿಲುವು ಇದೆ,” ಎಂದು ಹೇಳಿದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಎರಡೂ ಜಿಲ್ಲೆಗಳಲ್ಲಿ ವಿಸ್ತರಿಸಿಕೊಳ್ಳುತ್ತಿರುವುದಾಗಿ ಸಚಿವರು ಹೇಳಿದರು.“ಈ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸದರು, ಶಾಸಕರ ಅಭಿಪ್ರಾಯ ಮುಖ್ಯ. ತಜ್ಞರಿಂದ ಅಧ್ಯಯನ ಮುಂದುವರಿದಿದೆ. ಸರ್ಕಾರದ ವಿವಿಧ ಇಲಾಖೆಗಳ ತಜ್ಞರು…

ಮುಂದೆ ಓದಿ..
ಸುದ್ದಿ 

ವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು

Taluknewsmedia.com

Taluknewsmedia.comವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು ವಿಜಯಪುರದಲ್ಲಿ ಆರ್ಥಿಕ ಅಡಚಣೆಯಿಂದ ವೈದ್ಯಕೀಯ ಶಿಕ್ಷಣ ತೊರೆಯುವ ಸ್ಥಿತಿಗೆ ತಲುಪಿದ್ದ ಆರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಆಶಾಕಿರಣವಾಗಿ ಪರಿಣಮಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಮೆರುಗು ತೋರಿಸಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದಿದ್ದರೂ, ಶಿಕ್ಷಣ ಶುಲ್ಕ ಪಾವತಿಸಲು ಸಾಧ್ಯವಾಗದೇ ಆತಂಕಗೊಂಡಿದ್ದ ಈ ವಿದ್ಯಾರ್ಥಿಗಳ ವಿಷಯ ತಿಳಿದ ಪಾಟೀಲ್ ಅವರು, ತಮ್ಮ ಕಚೇರಿಯ ಮೂಲಕ ಒಟ್ಟು ₹10,21,380ರ ಸಹಾಯಧನವನ್ನು ಬಿಡುಗಡೆ ಮಾಡಿಸಿದ್ದಾರೆ. ಈ ಮೊತ್ತದಿಂದ ಮೊದಲ ವರ್ಷದ ಕಾಲೇಜು ಫೀಸ್‌, ವಸತಿ ಮತ್ತು ಊಟದ ವೆಚ್ಚಗಳನ್ನು ನಿಭಾಯಿಸಲು ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಪಾಟೀಲ್ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, “ನೀವು ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸಮಾಜಕ್ಕೆ ಸೇವೆ ಸಲ್ಲಿಸುವ ಆದರ್ಶ ವೈದ್ಯರಾಗಬೇಕು” ಎಂದು ಹಾರೈಸಿದರು. ಈ ಸಂದರ್ಭ ಬಿಎಲ್ಡಿಇ ಸಂಸ್ಥೆಯ ಮುಖ್ಯ…

ಮುಂದೆ ಓದಿ..