ಸುದ್ದಿ 

ಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ “ಜುಮ್ಕಿ” ಚಿತ್ರದ ಸ್ಕ್ರಿಪ್ಟ್ ಪೂಜೆ

Taluknewsmedia.com

Taluknewsmedia.comಮೈಸೂರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ “ಜುಮ್ಕಿ” ಚಿತ್ರದ ಸ್ಕ್ರಿಪ್ಟ್ ಪೂಜೆ ಮೈಸೂರು: ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಕನ್ನಡ ಚಲನಚಿತ್ರ “ಜುಮ್ಕಿ” ಚಿತ್ರದ ಸ್ಕ್ರಿಪ್ಟ್ ಪೂಜೆ ಈ ದಿನ ಚಾಮುಂಡಿ ಬೆಟ್ಟದ ಪ್ರಸಿದ್ಧ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ನಿರ್ದೇಶಕ ಹಾಗೂ ನಾಯಕನಟ M.J. ಜಯರಾಜ್ ಈ ಸಂದರ್ಭ ಹಾಜರಾಗಿ ಪೂಜೆಯನ್ನು ಮುನ್ನಡೆಸಿದರು. ಅವರು “ದೈವ ಚಿತ್ರದಲ್ಲಿ ನಟಿಸಿ, ಆಕ್ಷನ್ ಕಟ್ ಹೇಳಿರುವ” ಅನುಭವವನ್ನು ಪಡೆದುಕೊಂಡ ನಂತರ, ಹೊಸ ಸಿನಿಮಾದ ಸದ್ದಿಗೆ ಫಿದಾ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಚಿತ್ರದ ನಿರ್ಮಾಪಕರು ಸಂಗಮ್ಮ ರಾಮಣ್ಣ ಮತ್ತು ಮೇಘಲಮನಿಯವರು, ನಿರ್ದೇಶನ ಜೊತೆಗೆ ನಾಯಕನಟನಾಗಿ ಅಭಿನಯಿಸುತ್ತಿರುವ ಜಯರಾಜ್ ಅವರನ್ನು ಬೆಂಬಲಿಸಿದ್ದಾರೆ. ಚಿತ್ರ ಕಥೆಯನ್ನು VCN ಮಂಜುರಾಜ್ ಸೂರ್ಯ ರಚಿಸಿದ್ದು, ಸಿದ್ಧಾರ್ಥ್ H.R. ಛಾಯಾಗ್ರಹಣ ಮತ್ತು ವಿಜಯ್ ಮಂಜಯ್ಯ ಸಂಗೀತ ನಿರ್ದೇಶನ ನಡೆಸುತ್ತಿದ್ದಾರೆ. ಪೂಜೆಯಲ್ಲಿ ನಿರ್ದೇಶಕ M.J. ಜಯರಾಜ್, ಕಥೆಗಾರ VCN ಮಂಜುರಾಜ್, ಛಾಯಾಗ್ರಾಹಕ…

ಮುಂದೆ ಓದಿ..
ಸುದ್ದಿ 

ಚಾಮರಾಜನಗರ: ಟಿಪ್ಪರ್ ಡಿಕ್ಕಿ – ಕಾರಿನಲ್ಲಿ ಸವಾರ ಕೇರಳ ದಂಪತಿ ಸಾವು

Taluknewsmedia.com

Taluknewsmedia.comಚಾಮರಾಜನಗರ: ಟಿಪ್ಪರ್ ಡಿಕ್ಕಿ – ಕಾರಿನಲ್ಲಿ ಸವಾರ ಕೇರಳ ದಂಪತಿ ಸಾವು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಮಾದಾಪಟ್ಟಣದ ಬಳಿ ದಾರ್ಘಟನೆಯಾಗಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ಕರಿಕಲ್ಲು ವೆಸ್ಟ್ ಬಳಿ ತುಂಬಿದ್ಧ ಟಿಪ್ಪರ್ ಡಿಕ್ಕಿ ಹೊಡೆದು, ಕಾರು ಜಮೀನಿಗೆ ನುಗ್ಗಿದೆ. ಘಟನೆಯ ಪರಿಣಾಮವಾಗಿ ಕಾರಿನಲ್ಲಿದ್ದ ಕೇರಳ ಮೂಲದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ತಂಡ ತಲುಪಿದ್ದು, ದಾರ್ಘಟನೆಯ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಟಿಪ್ಪರ್ ನಿರ್ವಹಣೆಯಲ್ಲಿ ಲೋಪವಿದ್ದುದರಿಂದ ಈ ದುರಂತ ಸಂಭವಿಸಿದೆ ಎಂದು ಕಾಣುತ್ತಿದೆ. ಸ್ಥಳದಲ್ಲಿ ಪೊಲೀಸರ ಸಹಾಯವಾಣಿ ಮತ್ತು ಪೊಲೀಸರು ದುರಂತ ನಿರ್ವಹಣೆ ಕಾರ್ಯಾಚರಣೆ ನಡೆಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಬ್ಯಾಂಕಾಕ್‌ನಿಂದ ಕಾನೂನು ವಿರೋಧಿ ಪ್ರಾಣಿಸಂಗ್ರಹ – ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

Taluknewsmedia.com

Taluknewsmedia.comಬ್ಯಾಂಕಾಕ್‌ನಿಂದ ಕಾನೂನು ವಿರೋಧಿ ಪ್ರಾಣಿಸಂಗ್ರಹ – ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ ಬೆಂಗಳೂರು: ಬ್ಯಾಂಕಾಕ್‌ನಿಂದ ಕಾನೂನು ಉಲ್ಲಂಘಿಸಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 27 ವರ್ಷದ ಪ್ರಯಾಣಿಕನ ಬ್ಯಾಗ್ ಪರಿಶೀಲನೆಯಾಗಿದ್ದಾಗ, ಲಗೇಜ್‌ನಲ್ಲಿ ಅಕ್ರಮ ಪ್ರಾಣಿ ಸಾಗಣೆ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಲಗೇಜ್ ಜೊತೆಗೆ ವಶಪಡಿಸಿಕೊಂಡು, ಪ್ರಕರಣ ದಾಖಲಾಗಿದ್ದು ಮುಂದಿನ ವಿಚಾರಣೆಗೆ ಒಳಪಡಿಸಿದ್ದಾರೆ. ಯುವಕನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಮುಂದೆ ಓದಿ..
ಸುದ್ದಿ 

ಲವ್ ಜಿಹಾದ್ ಅಥವಾ ಪ್ರೀತಿ ಪ್ರೇಮದ ಧರ್ಮ ಯುದ್ದ ಅಥವಾ ಪ್ರೀತಿಯಿಂದ ಮತಾಂತರ ಯುದ್ಧ ………

Taluknewsmedia.com

Taluknewsmedia.comಲವ್ ಜಿಹಾದ್ ಅಥವಾ ಪ್ರೀತಿ ಪ್ರೇಮದ ಧರ್ಮ ಯುದ್ದ ಅಥವಾ ಪ್ರೀತಿಯಿಂದ ಮತಾಂತರ ಯುದ್ಧ ……… ಇದು ನಿಜವೇ, ಆರೋಪ ಮಾತ್ರವೇ,ಎಲ್ಲೋ ಅಪರೂಪದ ಸಣ್ಣ ಘಟನೆಗಳೇ, ವ್ಯವಸ್ಥಿತ ಜಾಲವೇ, ಸಹಜ ಪ್ರೀತಿ ಪ್ರೇಮದ ಪ್ರಕರಣಗಳೇ….. ಮನುಷ್ಯರನ್ನೇ ಧರ್ಮದ ಆಧಾರದ ಮೇಲೆ ಒಡೆದು, ನಮ್ಮದೇ ಶ್ರೇಷ್ಠ ಎಂಬ ಮನೋಭಾವ ಬೆಳೆಸಿ, ಜೊತೆಗೆ ಇತರ ಧರ್ಮಗಳ ವಿರುದ್ಧ ದ್ವೇಷ ಭಾವನೆ ಮೂಡಿಸಿ ಅದರ ನಾಶಕ್ಕೆ ಪ್ರಯತ್ನಿಸುತ್ತಾ ಇರುವ ಧಾರ್ಮಿಕ ಮುಖಂಡರುಗಳು ಹೆಚ್ಚಾಗುತ್ತಿರುವ ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಖಚಿತವಾಗಿ ಏನನ್ನಾದರೂ ಹೇಳುವುದು ಕಷ್ಟ. ಭಾರತದಲ್ಲಿ ರಾಜಕೀಯ ಕಾರಣದಿಂದಾಗಿ ಸತ್ಯ ಮತ್ತು ಸುಳ್ಳುಗಳ ನಡುವಿನ ಅಂತರ ತುಂಬಾ ಕಡಿಮೆಯಾಗಿದೆ. ಲವ್ ಜಿಹಾದ್ ಎಂಬುದು ನನಗೆ ಅರ್ಥವಾಗಿರುವುದೇನೆಂದರೆ ,ಮುಸ್ಲಿಂ ಮೂಲಭೂತವಾದಿಗಳು ಹಿಂದೂ ಹೆಣ್ಣುಮಕ್ಕಳನ್ನು ಪ್ರೀತಿಸಿ ಅಥವಾ ಪ್ರೀತಿಯ ನಾಟಕವಾಡಿ ಅವರನ್ನು ಮದುವೆಯಾಗಿ, ಅವರನ್ನು ಮತ್ತು ಅವರ ಮಕ್ಕಳನ್ನು ಇಸ್ಲಾಮೀಕರಣ ಮಾಡಿ ಭಾರತವನ್ನು ಇಸ್ಲಾಂ ರಾಷ್ಟ್ರವನ್ನಾಗಿ…

ಮುಂದೆ ಓದಿ..
ಸುದ್ದಿ 

ನೆಲಮಂಗಲ: ಪಂಚಾಯತ್ ಸದಸ್ಯನ ಮೇಲೆ ಗುಂಡಿನ ದಾಳಿ – ಇಬ್ಬರು ಅಪರಿಚಿತರ ಕೃತ್ಯ!

Taluknewsmedia.com

Taluknewsmedia.comನೆಲಮಂಗಲ: ಪಂಚಾಯತ್ ಸದಸ್ಯನ ಮೇಲೆ ಗುಂಡಿನ ದಾಳಿ – ಇಬ್ಬರು ಅಪರಿಚಿತರ ಕೃತ್ಯ! ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಭೀಕರ ಗುಂಡಿನ ದಾಳಿ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಸಲೀಂ ಅವರ ಮೇಲೆ ಇಬ್ಬರು ಅಪರಿಚಿತರು ಗುಂಡು ಹಾರಿಸಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಸಲೀಂ ತಮ್ಮ ಮನೆಯ ಮುಂದೆ ಕೆಲವು ಜನರ ಜೊತೆ ಮಾತನಾಡುತ್ತಿದ್ದ ವೇಳೆ, ಅಚ್ಚರಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳಕ್ಕೆ ಬಂದು ಗುಂಡು ಹಾರಿಸಿ ಪರಾರಿಯಾದರು. ಗುಂಡು ಸಲೀಂ ಅವರ ಕೈಗೆ ತಗುಲಿ ಅವರು ಗಾಯಗೊಂಡಿದ್ದಾರೆ. ಗಾಯಾಳು ಸಲೀಂ ಅವರನ್ನು ತಕ್ಷಣವೇ ನೆಲಮಂಗಲ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಆಸ್ಪತ್ರೆ ಬಳಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನತೆಯಾಗಿದೆ. ಘಟನೆಯ ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ…

ಮುಂದೆ ಓದಿ..
ಸುದ್ದಿ 

ಚಿಕ್ಕಮಗಳೂರು : ಹೋಂಸ್ಟೇ ಬಾತ್‌ರೂಮ್‌ನಲ್ಲಿ ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ ಮುಂದುವರಿಕೆ

Taluknewsmedia.com

Taluknewsmedia.comಚಿಕ್ಕಮಗಳೂರು : ಹೋಂಸ್ಟೇ ಬಾತ್‌ರೂಮ್‌ನಲ್ಲಿ ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ ಮುಂದುವರಿಕೆ ಸ್ನೇಹಿತೆಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಯುವತಿ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ರಂಜಿತಾ (27) ಎಂದು ಗುರುತಿಸಲಾಗಿದ್ದು, ಅವರು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿಯಾಗಿದ್ದಾರೆ. ರಂಜಿತಾ ಎಂಎಸ್ಸಿ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅಕ್ಟೋಬರ್ 25ರಂದು ನಡೆದ ಈ ಘಟನೆ ಕುರಿತಂತೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ. ರಂಜಿತಾ ತಮ್ಮ ಸ್ನೇಹಿತೆ ರೇಖಾ ಅವರೊಂದಿಗೆ ಸ್ನೇಹಿತೆಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಹಾಂದಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದರು. ಭಾನುವಾರ ಬೆಳಗ್ಗೆ ಸ್ನಾನಕ್ಕೆ ಹೋದ ರಂಜಿತಾ ಬಹಳ ಹೊತ್ತಾದರೂ ಹೊರಬರದೇ ಇದ್ದ ಕಾರಣ ಅನುಮಾನಗೊಂಡ ರೇಖಾ ಬಾಗಿಲು ತೆರೆದು ನೋಡಿದಾಗ,…

ಮುಂದೆ ಓದಿ..
ಸುದ್ದಿ 

ಹಾವೇರಿ: ಬಕೆಟ್ ಗೆ ಬಿದ್ದು ಮಗು ದಾರುಣ ಸಾವು

Taluknewsmedia.com

Taluknewsmedia.comಹಾವೇರಿ: ಬಕೆಟ್ ಗೆ ಬಿದ್ದು ಮಗು ದಾರುಣ ಸಾವು ಹಾವೇರಿ ಜಿಲ್ಲೆಯ ಶಿವಬಸವನಗರದಲ್ಲಿ ನಡೆದ ದಾರುಣ ಘಟನೆ ಎಲ್ಲರ ಮನಸ್ಸನ್ನೂ ಬೆಚ್ಚಿಬೀಳಿಸಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಬಕೆಟ್‌ನಲ್ಲಿ ನೀರು ಇದ್ದುದನ್ನು ಗಮನಿಸದೇ, ಒಂದು ವರ್ಷದ ದಕ್ಷಿತ್ ಯಳಂಬಲ್ಲಿಮಠ ಬಕೆಟ್‌ಗೆ ತಲೆ ಕೆಳಗಾಗಿ ಬಿದ್ದಿದ್ದಾನೆ. ಆಟದ ಮಧ್ಯೆ ಸಂಭವಿಸಿದ ಈ ಘಟನೆ ಗಮನಿಸಿದ ಹೆತ್ತವರು ಗಾಬರಿಗೊಂಡು ಓಡಿ ಬಂದಿದ್ದಾರೆ. ಆದರೆ, ಆಗಲೇ ದಕ್ಷಿತ್ ಪ್ರಜ್ಞೆ ತಪ್ಪಿದ್ದ. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಈ ದುಃಖದ ಘಟನೆಯ ಹಿನ್ನೆಲೆಯಲ್ಲಿ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡುವಂತ ಘಟನೆ ಇದು. ಬಕೆಟ್, ಟಬ್, ನೀರಿನ ಟ್ಯಾಂಕ್ ಮುಂತಾದವುಗಳಲ್ಲಿ ಅಲ್ಪ ಪ್ರಮಾಣದ ನೀರು ಅಪಾಯಕಾರಿಯಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮುಂದೆ ಓದಿ..
ಸುದ್ದಿ 

ಕುಂಬಳಗೋಡು: ತಂದೆಯಿಂದಲೇ ಮಗಳ ಹತ್ಯೆ – ದಾರುಣ ಘಟನೆ

Taluknewsmedia.com

Taluknewsmedia.comಕುಂಬಳಗೋಡು: ತಂದೆಯಿಂದಲೇ ಮಗಳ ಹತ್ಯೆ – ದಾರುಣ ಘಟನೆ ಪಿತೃತ್ವದ ಹೆಸರಿನಲ್ಲಿ ಜೀವ ಕಳೆದುಕೊಂಡಿದೆ ಬಾಲಕಿ ಸಿರಿ (7). ತಂದೆಯ ಕೈಯಿಂದಲೇ ಮಗಳು ಬಲಿಯಾದ ಹೃದಯವಿದ್ರಾವಕ ಘಟನೆ ನಗರ ಉಪನಗರ ಕುಂಬಳಗೋಡು ಬಳಿಯ ಕನ್ನಿಕಾ ಬಡಾವಣೆಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ದರ್ಶನ್ ಎಂಬಾತನಿಗೆ ಶಿಲ್ಪ ಎಂಬ ಮಹಿಳೆಯೊಂದಿಗೆ ಎರಡನೇ ಮದುವೆಯಾಗಿದ್ದು, ಇವರ ಜೊತೆಗೆ ಶಿಲ್ಪಾಳ ಮೊದಲ ಮದುವೆಯಿಂದ ಜನಿಸಿದ ಮಗಳು ಸಿರಿ ವಾಸಿಸುತ್ತಿದ್ದರು. ಶನಿವಾರ ಸಂಜೆ ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದ್ದು, ಅದರ ಆಕ್ರೋಶದಲ್ಲಿ ದರ್ಶನ್, ಮಗು ಸಿರಿಯ ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಮಾಹಿತಿ ಪಡೆದ ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಶವವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ಆರೋಪಿ ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಪೊಲೀಸರು ಶೋಧ ಕಾರ್ಯಾರಂಭಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಭಾರೀ…

ಮುಂದೆ ಓದಿ..
ಸುದ್ದಿ 

ಮೂರು ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಪತಿಯನ್ನೇ ಕೊಂದ ಪತ್ನಿ? — ಸಿ.ಆರ್.ಪಿ.ಎಫ್ ಯೋಧನ ಸಾವು ಸುತ್ತ ಹೊಸ ಅನುಮಾನಗಳು

Taluknewsmedia.com

Taluknewsmedia.comಮೂರು ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಪತಿಯನ್ನೇ ಕೊಂದ ಪತ್ನಿ? — ಸಿ.ಆರ್.ಪಿ.ಎಫ್ ಯೋಧನ ಸಾವು ಸುತ್ತ ಹೊಸ ಅನುಮಾನಗಳು ಮೂರು ಕೋಟಿ ರೂಪಾಯಿ ಇನ್ಶುರೆನ್ಸ್ ಹಣಕ್ಕಾಗಿ ಪತಿಯನ್ನೇ ಕೊಲೆಗೈದಿರುವ ಆರೋಪದಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣ ಮತ್ತೆ ಸುದ್ದಿಯಲ್ಲಿದೆ. ಸಿ.ಆರ್.ಪಿ.ಎಫ್ ಯೋಧ ತಾರೇಶ್ (37) ಅವರ ಸಾವು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಈಗ ಕುಟುಂಬದವರು ಆರೋಪಿಸಿದ್ದಾರೆ. ತಾರೇಶ್ ಅವರ ತಂದೆ ಬಸವರಾಜ್ ಮತ್ತು ತಾಯಿ ಮಂಜುಳಾ ಅವರು ಸೊಸೆ ದಿವ್ಯಾ ಹಾಗೂ ಆಕೆಯ ಸಹೋದರನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇವರ ಪ್ರಕಾರ, ತಾರೇಶ್ ಅವರ ಹೆಸರಿನಲ್ಲಿ ಸುಮಾರು ₹3 ಕೋಟಿ ಮೌಲ್ಯದ ಇನ್ಶುರೆನ್ಸ್ ಪಾಲಿಸಿಯನ್ನು, ಅವರ ಸಾವಿನ ಕೇವಲ ಮೂರು ತಿಂಗಳ ಮುಂಚೆಯೇ ತೆಗೆದುಕೊಳ್ಳಲಾಗಿತ್ತು. ಘಟನೆ ಹಿನ್ನೆಲೆ.. ತಾರೇಶ್ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದವರು. ಸುಮಾರು 7 ವರ್ಷಗಳ ಹಿಂದೆ ದಿವ್ಯಾಳೊಂದಿಗೆ ವಿವಾಹವಾಗಿದ್ದರು.ದಂಪತಿಗಳು…

ಮುಂದೆ ಓದಿ..
ಸುದ್ದಿ 

ಕೊಪ್ಪಳ ಗಣಿ ವಿಭಾಗದಲ್ಲಿ ಭ್ರಷ್ಟಾಚಾರ ಆರೋಪ: ಶಾಸಕ ಬಸವರಾಜ ರಾಯರಡ್ಡಿ ಕಠಿಣ ಕ್ರಮಕ್ಕೆ ಆಗ್ರಹ

Taluknewsmedia.com

Taluknewsmedia.comಕೊಪ್ಪಳ ಗಣಿ ವಿಭಾಗದಲ್ಲಿ ಭ್ರಷ್ಟಾಚಾರ ಆರೋಪ: ಶಾಸಕ ಬಸವರಾಜ ರಾಯರಡ್ಡಿ ಕಠಿಣ ಕ್ರಮಕ್ಕೆ ಆಗ್ರಹ ಕೊಪ್ಪಳ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ, ಇಲಾಖೆಯ ಅಧಿಕಾರಿಗಳನ್ನು ತಕ್ಷಣ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಸವರಾಜ ರಾಯರಡ್ಡಿ ಪತ್ರ ಬರೆದಿದ್ದಾರೆ. ಯಲಬುರ್ಗಾ ಶಾಸಕ ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ರಾಯರಡ್ಡಿ ಅವರು, “ಕೆಲವರು ಅಧಿಕಾರಿಗಳು ಹತ್ತಾರು ವರ್ಷಗಳಿಂದ ಇದೇ ಜಿಲ್ಲೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಕಾನೂನು ತಿಳಿವಳಿಕೆ ಇಲ್ಲದೇ ಕೆಳ ಹಂತದ ಸಿಬ್ಬಂದಿಯ ಪ್ರಭಾವಕ್ಕೆ ಒಳಗಾಗಿದ್ದಾರೆ. ಈ ಕ್ರಮದಿಂದ ಸರ್ಕಾರದ ಗೌರವ ಹಾಳಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಅವರು ಇಲಾಖೆಯ ಕನಿಷ್ಠ 10ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಕಾರ್ಯಪಡೆ ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.…

ಮುಂದೆ ಓದಿ..