ನೇಪಾಳದ ದಂಗೆ……
Taluknewsmedia.comನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ.ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ ಮಾತ್ರ ರಕ್ಷಣಾತ್ಮಕವಾಗಿ ಹೋರಾಡುತ್ತಿದ್ದ….. ಆದರೆ ಮಧ್ಯಕಾಲೀನ ಯುಗದಲ್ಲಿ ವಿಶ್ವದ ಬಹುತೇಕ ನಾಗರಿಕತೆಗಳಲ್ಲಿ ಹಿಂಸೆ ತಾಂಡವವಾಡುತ್ತಿತ್ತು. ಮನುಷ್ಯನ ವಿಸ್ತರಣಾ ಸ್ವಭಾವ ಮತ್ತು ತನ್ನ ಅಹಂ ಎಲ್ಲೆ ಮೀರಿತ್ತು. ಎಲ್ಲೆಲ್ಲಿಯೂ ರಕ್ತದ ಕೋಡಿಗಳು ಹರಿದವು. ಹತ್ತೊಂಬತ್ತನೆಯ ಶತಮಾನದ…
ಮುಂದೆ ಓದಿ..
